ಕೋರ್ಟಿನಲ್ಲಿ ಕೇಸ್ ಹಾಕಿದ್ರೆ ಜೈಲಿಗೆ ಹೋಗೋದು ಪ್ರದೀಪನೇನಾ?
ಇದು ಹಂಡ್ರೆಡ್ ಪರ್ಸೆಂಟ್ ನಿಜ.. ಯಾಕಂದ್ರೆ ಪ್ರದೀಪ್ ಒಬ್ಬ ಸ್ವಯಂ ಘೋಷಿತ ಪ್ರಾಧ್ಯಾಪಕ. (ಫೇಕ್ ಎಜುಕೇಷನ್, ಫೇಕ್ ಸರ್ಟಿಫಿಕೇಟ್) ತನಿಗೆ ತಾನೇ ಪ್ರಾಧ್ಯಾಪಕ ಅಂತ ಹೇಳಿಕೊಳ್ಳೋ ಪ್ರದೀಪ್, ತನ್ನ ಬಳಿ ಇರೋ ದಾಖಲೆಗಳನ್ನು ತನಿಖಾ ಸಂಸ್ಥೆಗಳ ಮುಂದಿಟ್ಟು ಆರೋಪಗಳನ್ನು ಸಾಬೀತು ಮಾಡಬಹುದಿತ್ತು. ಆದ್ರೆ ಕೋರ್ಟಲ್ಲಿ ಈತನದ್ದು ಸುಳ್ಳು ಕೇಸು ಅಂತ ಗೊತ್ತಾದ್ರೆ, ಪ್ರದೀಪ್ ವಿರುದ್ಧವೇ ನ್ಯಾಯಾಲಯ ಕ್ರಮ ಕೈಗೊಳ್ಳೋ ಸಾಧ್ಯತೆ ನಿಚ್ಚಳವಾಗಿದೆ. ಇದೇ ಕಾರಣಕ್ಕೆ, ಕೋರ್ಟಿಗೆ ಹೋದ್ರೆ ನನ್ನ ಬುಡಕ್ಕೇ ಬರುತ್ತೆ ಅನ್ನೋದನ್ನ ಅರಿತ ಸ್ವಯಂ ಘೋಷಿತ ಪ್ರಾಧ್ಯಾಪಕ, ಸೋಶಿಯಲ್ ಮೀಡಿಯಾ ಮುಂದೆ ಬಂದಿದ್ದಾನೆ.
ಪ್ರದೀಪ್ ಬಗ್ಗೆ ಜನ ಏನಂತಾರೆ?
ಈ ಪ್ರದೀಪ್ ಇತಿಹಾಸ ತುಂಬಾನೇ ಕರಾಳವಾಗಿದೆ. ಈತ ಸ್ವಯಂ ಘೋಷಿತ ಪ್ರಾಧ್ಯಾಪಕ ಆಗಿದ್ರೂ, ಯಾವ ಕಾಲೇಜಿನಲ್ಲೂ ಭದ್ರವಾಗಿ ಕೆಲಸ ಮಾಡಲಿಲ್ಲ. ಯಾಕಂದ್ರೆ, ಈತನ ವಕ್ರ ಬುದ್ದಿಯನ್ನು ನೋಡಿದೋರೆಲ್ಲಾ ಈತನಿಗೆ ಗೇಟ್ ಪಾಸ್ ಕೊಟ್ಟಿದ್ದಾರೆ. ಎಲ್ಲೂ ಕೆಲಸ ಸಿಗದೇ ಕೊನೆಗೆ ಡಾ.ಕೆ.ಸುಧಾಕರ್ ಅವರ ಬಳಿ ಹೋಗಿ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದಾನೆ. ಆದ್ರೆ ಈತನ ಡಿಮ್ಯಾಂಡ್ ಗೆ ಡಾ.ಕೆ.ಸುಧಾಕರ್ ಬಗ್ಗದೇ ಇದ್ದಾಗ, ನವೀನ್ ಕಿರಣ್ ಜೊತೆ ಸೇರಿಕೊಂಡು, ಸೋಶಿಯಲ್ ಮೀಡಿಯಾಗಳನ್ನು ಬಳಸಿಕೊಂಡು ಅಪ ಪ್ರಚಾರ ಶುರು ಮಾಡಿದ್ದಾನೆ. ದಾಖಲೆಗಳಿದ್ರೆ ಕೋರ್ಟಲ್ಲಿ ಪ್ರೂವ್ ಮಾಡಬಹುದಿತ್ತು. ಆದ್ರೆ ಕೋರ್ಟಿಗೆ ಹೋದ್ರೆ, ಸುಳ್ಳು ಕೇಸ್ ದಾಖಲಿಸಿ ಎಲ್ಲಿ ನ್ಯಾಯಾಧೀಶರು ನನ್ನನ್ನೇ ಜೈಲಿಗೆ ಹಾಕ್ತಾರೋ ಅನ್ನೋ ಭಯ ಪ್ರದೀಪನಿಗಿದೆ. ಇನ್ನು ಪ್ರದೀಪನ ಡಬಲ್ ಗೇಮ್ ಚಿಕ್ಕಬಳ್ಳಾಪುರದ ಜನರಿಗೂ ಗೊತ್ತಿದ್ದು, ಸೋಶಿಯಲ್ ಮೀಡಿಯಾಗಳಲ್ಲೇ ವಾರ್ ಶುರುವಾಗಿದೆ. ಪ್ರದೀಪ್ ಮಾಡಿದ ಆರೋಪಗಳಿಗೆ ಜನರೇ ತಕ್ಕ ತಿರುಗೇಟು ನೀಡ್ತಿದ್ದಾರೆ.
No comments:
Post a Comment